The most-visited English Wikipedia articles, updated daily. Learn more...
ವಿಶ್ವ ಶಿಕ್ಷಕರ ದಿನವನ್ನು ಪ್ರತಿವರ್ಷ ಸೆಪ್ಟೆಂಬರ್ ೫ ರಂದು ಆಚರಿಸಲಾಗುತ್ತದೆ. ೧೯೯೪ ರಲ್ಲಿ ಸ್ಥಾಪನೆಯಾದ ಇದು ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆ (ಐಎಲ್ಒ) ಮತ್ತು ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ (ಯುನೆಸ್ಕೋ) ಶಿಫಾರಸುಗಳಿಗೆ ಸಹಿ ಹಾಕಿದ ನೆನಪಿಗಾಗಿ ಇದೆ. ೧೯೬೬ ರ "ಶಿಕ್ಷಕರ ಸ್ಥಿತಿಗೆ ಸಂಬಂಧಿಸಿದ ಐಎಲ್ಒ / ಯುನೆಸ್ಕೋ ಶಿಫಾರಸು" ವಿಶ್ವದಾದ್ಯಂತದ ಶಿಕ್ಷಕರ ಸ್ಥಿತಿ ಮತ್ತು ಪರಿಸ್ಥಿತಿಗಳನ್ನು ಪರಿಹರಿಸುವ ಪ್ರಮಾಣಿತ ಸಾಧನವಾಗಿದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡ ಭಾಷಾ ಸಾಹಿತಿಗಳು
ಭಾರತ ಸರ್ಕಾರ ನೀಡುವ ಅತ್ಯುನ್ನತ ಸಾಹಿತ್ಯ ಪ್ರಶಸ್ತಿ ಎಂದರೆ ಅದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ. ವಾರ್ಷಿಕ ಪ್ರಶಸ್ತಿಗಳ ಜೊತೆಯಲ್ಲಿಯೇ ಭಾರತದ ವಿಭಿನ್ನ ಭಾಷೆಗಳ ಹಿರಿಯ ಸಾಹಿತಿಗಳನ್ನು ಆಯ್ಕೆ ಮಾಡಿ ಅವರಿಗೆ ಸಾಹಿತ್ಯ ಅಕಾಡೆಮಿ ಫೆಲೋ ಗೌರವ ನೀಡುತ್ತದೆ. ಇದರ ಜತೆಯಲ್ಲಿ ಯುವ ಸಾಹಿತಿಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರ, ಮಕ್ಕಳ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಬಾಲ ಸಾಹಿತ್ಯ ಪುರಸ್ಕಾರ, ಅನುವಾದ ಕ್ಷೇತ್ರದ ಸಾಧನೆಗೆ ಅನುವಾದ ಬಹುಮಾನಗಳನ್ನೂ ನೀಡಿ ಗೌರವಿಸಲಾಗುತ್ತದೆ.
ರಾಧಿಕಾ, ರಾಧಾರಾಣಿ ಮತ್ತು ರಾಧಿಕಾ ರಾಣಿ ಎಂದೂ ಕರೆಯಲ್ಪಡುವ ರಾಧೆಯನ್ನು ಬಹುತೇಕ ಯಾವಾಗಲೂ ಕೃಷ್ಣನ ಪಕ್ಕದಲ್ಲಿ ಚಿತ್ರಿಸಲಾಗುತ್ತದೆ ಮತ್ತು ಪ್ರಮುಖವಾಗಿ ರಾಧೆಯನ್ನು ಮೂಲ ದೇವತೆ ಅಥವಾ ಶಕ್ತಿಯೆಂದು ಪರಿಗಣಿಸುವ ಇಂದಿನ ವಲ್ಲಭ ಹಾಗೂ ಗೌಡೀಯ ವೈಷ್ಣವ ಪಂಥಗಳ ದೇವತಾಶಾಸ್ತ್ರದಲ್ಲಿ ಚಿತ್ರಿಸಲಾಗಿದೆ. ನಿಂಬಾರ್ಕ ಸಂಪ್ರದಾಯದಲ್ಲಿ ರಾಧೆಯು ಪ್ರಧಾನ ಪೂಜಾ ದೇವತೆ ಕೂಡ ಆಗಿದ್ದಾಳೆ, ಏಕೆಂದರೆ ಈ ಸಂಪ್ರದಾಯದ ಸ್ಥಾಪಕ ನಿಂಬಾರ್ಕನು ರಾಧೆ ಹಾಗೂ ಕೃಷ್ಣ ಒಟ್ಟಾಗಿ ಪರಮ ಸತ್ಯವನ್ನು ನಿರ್ಮಿಸುತ್ತಾರೆ ಎಂದು ಘೋಷಿಸಿದನು. ಕೃಷ್ಣ ಮತ್ತು ರಾಧೆ ಬಾಲ್ಯದಲ್ಲಿ ಸ್ನೇಹಿತರಾಗಿದ್ದರು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಕಸ್ತೂರಿರಂಗನ್ ವರದಿ ಮತ್ತು ಪಶ್ಚಿಮ ಘಟ್ಟ ಸಂರಕ್ಷಣೆ
"ನಾವು ಈಗಾಗಲೇ ಭೂಮಿಯ ಸಂಪನ್ಮೂಲಗಳಲ್ಲಿ ಅಗತ್ಯಕ್ಕಿಂತ 2 ರಿಂದ 3 ಪಟ್ಟು ಹೆಚ್ಚಿನ ಸಂಪನ್ಮೂಲಗಳನ್ನು ಬಳಸುತ್ತಿದ್ದೇವೆ. "ಭೂಮಿಯ ಪ್ರತಿ ವ್ಯಕ್ತಿಯ ಅಗತ್ಯಗಳನ್ನು ಪೂರೈಸಲು ಸಾಕಷ್ಟು ಒದಗಿಸುತ್ತದೆ, ಆದರೆ ಪ್ರತಿ ಮಾನವನ ದುರಾಸೆಯನ್ನಲ್ಲ " - ಎಂದು ಹೇಳಲಾಗುತ್ತದೆ (ಗಾಂಧೀಜಿ). ಈಗ ಮಾನವನ ಬದುಕಿಗೆ ಪರಿಸರ ರಕ್ಷಣೆಗೆ ಅತಿ ಸೂಕ್ಷ್ಮ ಪ್ರದೇಶವಾದ ಭಾರತದ ಪಶ್ಚಿಮ ಘಟ್ಟಗಳ ಪರಿಸರ ರಕ್ಷಣೆ ಅತಿ ಅಗತ್ಯ ಎಂಬುದ ಪರಿಸರ ತಜ್ಞರ ಅಭಿಪ್ರಾಯ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಗಡಿಯಾರವು ಸಮಯವನ್ನು ನಿರ್ದೇಶಿಸುವ ಸೂಚಿಸುವ, ಕಾಪಾಡುವ ಮತ್ತು ಒಂದು ಸಾಧನವಾಗಿದೆ. ಕ್ಲಾಕ್ ಎಂಬ ಪದವು ಅಂತಿಮವಾಗಿ ( ಡಚ್, ಉತ್ತರ ಪ್ರೆಂಚ್ ಮತ್ತು ಮಧ್ಯಕಾಲೀನ ಲ್ಯಾಟೀನ್ ಮೂಲಕ) ಸೆಲ್ಟಿಕ್ ಪದಗಳಾದ ಕ್ಲಾಗನ್ ಮತ್ತು ಕ್ಲೋಕ್ಕಾ ಎಂಬ ಪದಗಳಿಂದ ಬಂದಿದ್ದು ಇದರ ಅರ್ಥ ಘಂಟೆ ಎಂದಾಗಿದೆ. ಕಾಲಮಾನ ಶಾಸ್ತ್ರಜ್ಞರು ಮತ್ತು ಇತರ ವಿಶೇಷ ವ್ಯಕ್ತಿಗಳಿಗೆ ಗಡಿಯಾರ ಎಂಬ ಪದವು ಘಂಟೆಯನ್ನು ಮೊಳಗಿಸುವ ಘಂಟೆಗಳ ಸಮೂಹದ ಅಥವಾ ಜಾಗಟೆಯ ಮೂಲಕ ಕಾಲದ ಅವಧಿಗಳನ್ನು ಸೂಚಿಸುವ ಒಂದು ಯಾಂತ್ರಿಕ ಸಾಧನವಷ್ಟೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ರಾಧಾ ಕೃಷ್ಣರು ಹಿಂದೂ ಧರ್ಮದಲ್ಲಿ ಒಟ್ಟಾಗಿ ದೇವರ ಸ್ತ್ರೀ ಹಾಗೂ ಪುರುಷ ಅಂಶಗಳ ಸಮ್ಮಿಲನವೆಂದು ಕರೆಯಲ್ಪಡುತ್ತಾರೆ. ಕೃಷ್ಣನನ್ನು ಗೌಡೀಯ ವೈಷ್ಣವ ದೇವತಾಶಾಸ್ತ್ರದಲ್ಲಿ ಹಲವುವೇಳೆ ಸ್ವಯಂ ಭಗವಾನ್ ಎಂದು ನಿರ್ದೇಶಿಸಲಾಗುತ್ತದೆ ಮತ್ತು ರಾಧೆಯು ಕೃಷ್ಣನ ಪರಮ ಪ್ರಿಯೆ. ಕೃಷ್ಣನ ಜೊತೆಗೆ, ರಾಧೆಯನ್ನು ಪರಮ ದೇವತೆ ಎಂದು ಗುರುತಿಸಲಾಗುತ್ತದೆ, ಏಕೆಂದರೆ ಅವಳು ಕೃಷ್ಣನನ್ನು ತನ್ನ ಪ್ರೀತಿಯಿಂದ ನಿಯಂತ್ರಿಸುತ್ತಾಳೆ ಎಂದು ಹೇಳಲಾಗುತ್ತದೆ.
ಮಾನವ ಅಂಗರಚನಾಶಾಸ್ತ್ರದಲ್ಲಿ, ಮಣಿಕಟ್ಟು ಎಂಬುದಕ್ಕೆ ಅನೇಕ ವ್ಯಾಖ್ಯಾನಗಳಿವೆ 1) ಮಣಿಬಂಧದ ಎಲುಬುಗಳು, ಕೈಯ ಹತ್ತಿರದ ಅಸ್ಥಿ ಭಾಗವನ್ನು ರೂಪಿಸುವ ಎಂಟು ಮೂಳೆಗಳ ಜಾಲಬಂಧ; (2) ಮಣಿಬಂಧದ ಕೀಲು ಅಥವಾ ರೇಡಿಯೊಕಾರ್ಪಲ್ ಕೀಲು, ರೇಡಿಯಸ್ ಹಾಗೂ ಕಾರ್ಪಸ್ ನಡುವಿನ ಕೀಲು (3) ಮುಂದೋಳಿನ ಮೂಳೆಗಳ ಅಂತ್ಯದ ಭಾಗಗಳು ಹಾಗೂ ಅಂಗೈ ಮೂಳೆಗಳ ಹತ್ತಿರದ ಭಾಗಗಳು ಸೇರಿದಂತೆ ಮಣಿಬಂಧವನ್ನು ಸುತ್ತುವರಿದಿರುವ ಶಾರೀರಿಕ ಪ್ರದೇಶ.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಸರ್ ಐಸಾಕ್ ನ್ಯೂಟನ್ FRS (4 ಜನವರಿ 1643– 31 ಮಾರ್ಚ್ 1727 [OS: 25 ಡಿಸೆಂಬರ್ 1642– 20 March 1727]) ರವರು ಓರ್ವ ಆಂಗ್ಲ ಭೌತವಿಜ್ಞಾನಿ, ಗಣಿತಜ್ಞ, ಖಗೋಳಶಾಸ್ತ್ರಜ್ಞ, ಸ್ವಾಭಾವಿಕ ತತ್ವಜ್ಞಾನಿ, ರಸಸಿದ್ಧಾಂತಿ, ಹಾಗೂ ಬ್ರಹ್ಮಜ್ಞಾನಿಯಾಗಿದ್ದರು. ಗಮನಾರ್ಹ ಪ್ರಮಾಣದ ತಜ್ಞರು ಹಾಗೂ ಸಾರ್ವಜನಿಕರು ಅವರ ಬಗ್ಗೆ ಇತಿಹಾಸದ ಬಹುಪ್ರಭಾವಿ ವ್ಯಕ್ತಿ ಎಂದು ತಿಳಿದು ಭಾವಿಸಿಕೊಂಡಿದ್ದಾರೆ. 1687ರಲ್ಲಿ ಪ್ರಕಟಿಸಿದ ಅವರ ಫಿಲಾಸೊಫೀಸ್ ನ್ಯಾಚ್ಯುರಲಿಸ್ ಪ್ರಿನ್ಸಿಪಿಯಾ ಮ್ಯಾಥೆಮೆಟಿಕಾ (ಸಾಮಾನ್ಯವಾಗಿ ಪ್ರಿನ್ಸಿಪಿಯಾ ಎಂದು ಕರೆಯಲ್ಪಡುವ) ಪುಸ್ತಕವು ವಿಜ್ಞಾನದ ಇತಿಹಾಸದಲ್ಲೇ ಬಹು ಪ್ರಭಾವೀ ಪುಸ್ತಕಗಳಲ್ಲಿ ಒಂದಾಗಿದ್ದು ಅಭಿಜಾತ ಯಂತ್ರಶಾಸ್ತ್ರಕ್ಕೆ ಉತ್ತಮ ತಳಪಾಯ ಒದಗಿಸಿಕೊಟ್ಟ ಕೃತಿಯೆಂಬ ಹೆಗ್ಗಳಿಕೆ ಹೊಂದಿದೆ.
ನೀತಿ ಆಯೋಗ ಅಥವಾ ಭಾರತದ ಬದಲಾವಣೆಗಾಗಿನ ರಾಷ್ಟ್ರೀಯ ಸಂಸ್ಥೆ (ನ್ಯಾಷನಲ್ ಇನ್ಸ್ಟಿಟ್ಯೂಟಷನ್ ಫಾರ್ ಟ್ರಾನ್ಸ್ ಫಾರ್ಮಿಂಗ್ ಇಂಡಿಯಾ:NITI=National Institution for Transforming India)ವನ್ನು ಭಾರತದ ಯೋಜನಾ ಆಯೋಗದ ಬದಲಿಗೆ ಜನವರಿ ೨,೨೦೧೫ರಲ್ಲಿ ಸ್ಥಾಪಿಸಲಾಗಿದೆ.. ಇದು ಮುಖ್ಯವಾಗಿ ಭಾರತದ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ನೀತಿ ರೂಪಣೆಯಲ್ಲಿ ಬೌದ್ಧಿಕ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತದೆ.
ಕೃಷಿ (ವ್ಯವಸಾಯ) ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಅಂದರೆ ಆಹಾರ, ನಾರು, ಜೈವಿಕ ಇಂಧನ, ಔಷಧಗಳು ಮತ್ತು ಮಾನವ ಜೀವನವನ್ನು ಪೋಷಿಸಲು ಹಾಗೂ ವರ್ಧಿಸಲು ಬಳಸಲಾಗುವ ಇತರ ಉತ್ಪನ್ನಗಳಿಗಾಗಿ ಪ್ರಾಣಿಗಳು, ಸಸ್ಯಗಳು, ಶಿಲೀಂಧ್ರಗಳು, ಮತ್ತು ಇತರ ಜೀವಿಗಳ ಸಾಗುವಳಿ. ವ್ಯವಸಾಯವು ಮಾನವನ ಪುರಾತನ ವೃತ್ತಿಗಳಲ್ಲೊಂದಾಗಿದೆ.
ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಭಾರತ ಸರ್ಕಾರದಿಂದ ನಿಯೋಜನೆಗೊಳ್ಳುವ ಈ ಆಯೋಗವು ಕಾಲಕ್ಕನುಗುಣವಾಗಿ ಸರ್ಕಾರಿ ಕೆಲಸಗಾರರ ವೇತನ ಸ್ವರೂಪ ಬದಲಾವಣೆಗೆ ಶಿಫಾರಸ್ಸು ಮಾಡಲೆಂದೇ ರಚಿತವಾಗಿರುತ್ತದೆ. ಸ್ವತಂತ್ರ ಬಂದಾಗಿನಿಂದ ಇಲ್ಲಿಯವರೆವಿಗೂ ಏಳು ವೇತನ ಆಯೋಗಗಳನ್ನು ರಚಿಸಿ ಅವುಗಳಿಂದ ಸರ್ಕಾರಿ ಕೆಲಸಗಾರರ ವೇತನ ಕುರಿತಾಗಿ ಶಿಫಾರಸ್ಸು ಪಡೆಯಲಾಗಿದೆ. ಸರ್ಕಾರದ ನಾಗರೀಕ ಸೇವಾ ವಲಯಗಳು ಹಾಗು ದೇಶದ ಸೇನಾ ವಿಭಾಗಗಳಿಗೆ ವೇತನ ಆಯೋಗದ ಶಿಫಾರಸ್ಸು ಬಹು ಮುಖ್ಯವಾಗಿರುತ್ತದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಕೃತಕ ಬುದ್ಧಿಮತ್ತೆ ಅಥವಾ ಯಾಂತ್ರಿಕ ಬುದ್ಧಿಮತ್ತೆ (artificial intelligence) ಗಣಕ ವಿಜ್ಞಾನದ ಒಂದು ವಿಭಾಗ. ಪ್ರಮುಖ AI ಪಠ್ಯಪುಸ್ತಕಗಳು ಈ ಕ್ಷೇತ್ರವನ್ನು "ಬುದ್ಧಿಮತ್ತೆಯುಳ್ಳ ಯಂತ್ರಗಳ ವಿನ್ಯಾಸ ಮತ್ತು ಅಧ್ಯಯನ" ಎಂದು ಹೇಳುತ್ತವೆ. ಇದರಲ್ಲಿ ಒಂದು ಯಂತ್ರವು ತನ್ನ ಪರಿಸರವನ್ನು ಗ್ರಹಿಸಿ ತನಗೆ ಕೊಟ್ಟಿರುವ ಗುರಿಯತ್ತ ಹೆಚ್ಚು ಯಶಸ್ಸು ಪಡೆಯಲು ಅಗತ್ಯವಿರುವ ಕ್ರಮಗಳನ್ನು ತಾವೇ ಕೈಗೊಳ್ಳುತ್ತದೆ.
ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.
ಭಾರತದ ರಾಷ್ಟ್ರಪತಿಯ ನಂತರ ಭಾರತದ ಉಪ ರಾಷ್ಟ್ರಪತಿಯರು ಭಾರತ ಸರ್ಕಾರದಲ್ಲಿ ಎರಡನೇ ಅತ್ಯುನ್ನತ ಸಾಂವಿಧಾನಿಕ ಕಚೇರಿಯಾಗಿದ್ದಾರೆ. ಭಾರತದ ಸಂವಿಧಾನದ 63 ನೇ ವಿಧಿಗೆ ಅನುಸಾರವಾಗಿ, ರಾಜೀನಾಮೆ, ತೆಗೆದುಹಾಕುವಿಕೆ, ಮರಣ, ದೋಷಾರೋಪಣೆ ಅಥವಾ ಅಧ್ಯಕ್ಷರು ತಮ್ಮ ಕಾರ್ಯಗಳನ್ನು ನಿರ್ವಹಿಸಲು ಅಸಮರ್ಥತೆಯಿಂದಾಗಿ ಅನಿಶ್ಚಿತತೆ ಉಂಟಾದಾಗ ಉಪ ರಾಷ್ಟ್ರಪತಿಯರು ರಾಷ್ಟ್ರಪತಿಯರ ಕಾರ್ಯಗಳನ್ನು ನಿರ್ವಹಿಸುತ್ತಾರೆ. ಅವರು ಭಾರತದ ಸಂಸತ್ತಿನ ಮೇಲ್ಮನೆಯಾದ ರಾಜ್ಯಸಭೆಯ ಪದನಿಮಿತ್ತ ಅಧ್ಯಕ್ಷರೂ ಆಗಿದ್ದಾರೆ.
ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ ಆಧುನಿಕ ಕನ್ನಡ ಸಾಹಿತ್ಯದ ಕಾದಂಬರಿಕಾರರು ಮತ್ತು ಲೇಖಕರು. ಕನ್ನಡ ಭಾಷೆಯಲ್ಲಿ ಪುಸ್ತಕಗಳನ್ನು ಬರೆದಿರುವ ಇವರ ಕೃತಿಗಳು ಇಂಗ್ಲೀಷ್ ಹಾಗೂ ಭಾರತೀಯ ಭಾಷೆಗಳಿಗೆ ಅನುವಾದಗೊಂಡು ಭಾರತದ ಸಾಹಿತ್ಯವಲಯದಲ್ಲಿ ಹೆಸರಾಗಿದ್ದಾರೆ. ಇವರ ಕಾದಂಬರಿಗಳು ಹಲವಾರು ಮರುಮುದ್ರಣಗಳನ್ನು ಕಂಡು ಕನ್ನಡದ ಜನಪ್ರಿಯ ಬರಹಗಾರರಾಗಿದ್ದಾರೆ.ಇವರಿಗೆ ಭಾರತ ಸರ್ಕಾರವು ೨೦೨೩ನೇ ಸಾಲಿನಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.
ಬೆಂಗಳೂರು : ಕರ್ನಾಟಕ ರಾಜ್ಯದ ಅತಿ ದೊಡ್ಡ ನಗರ ಮತ್ತು ರಾಜಧಾನಿ ಕೇಂದ್ರ ಹಾಗೂ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಕೇಂದ್ರ ಮತ್ತು ತಾಲ್ಲೂಕು ಕೇಂದ್ರ ಹಾಗೂ ಕಸಬಾ ಹೋಬಳಿಯ ಕೇಂದ್ರವಾಗಿದೆ, ಪ್ರಸ್ತುತ ಬೆಂಗಳೂರು ತಾಲ್ಲೂಕು 408 ಚ.ಕಿ.ಮೀ ವಿಸ್ತೀರ್ಣ ಹೊಂದಿದೆ. ಬೆಂಗಳೂರು ನಗರವು ಕ್ರಿ.ಶ.೧೫೩೭ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾಯಿತು. ಇದು ದಕ್ಷಿಣ ಪ್ರಸ್ಥಭೂಮಿಯ ಮೇಲಿದ್ದು, ಕರ್ನಾಟಕದ ಆಗ್ನೇಯ ದಿಕ್ಕಿನಲ್ಲಿದೆ.
ಮೈಸೂರು ದಸರವು ಭಾರತದ ಕರ್ನಾಟಕ ರಾಜ್ಯದ ನಾಡಹಬ್ಬ (ರಾಜ್ಯ ಉತ್ಸವ) ಆಗಿದೆ. ಇದು ಮಹಾಲಯ ಅಮವಾಸ್ಯೆ ನಂತರದ ೧೦ ದಿನಗಳ ಹಬ್ಬವಾಗಿದ್ದು, ನವರಾತ್ರಿ ಎಂದು ಕರೆಯಲ್ಪಡುವ ಒಂಬತ್ತು ರಾತ್ರಿಗಳಿಂದ ಪ್ರಾರಂಭವಾಗುತ್ತದೆ ಮತ್ತು ಕೊನೆಯ ದಿನವನ್ನು ವಿಜಯದಶಮಿ ಎಂದು ಹೇಳುವ ಸಂದರ್ಭದಲ್ಲಿ ಅರ್ಜುನ ಆಚರಿಸಲಾಗುತ್ತದೆ. ಇದು ಸಾಮಾನ್ಯವಾಗಿ ಸೆಪ್ಟೆಂಬರ್ ಮತ್ತು ಅಕ್ಟೋಬರ್ನ ಗ್ರೆಗೋರಿಯನ್ ತಿಂಗಳುಗಳಲ್ಲಿ ಬರುತ್ತದೆ.
ಕೃಷ್ಣದೇವರಾಯ ಕ್ರಿ.ಶ.೧೫೦೯ ರಿಂದ ೧೫೨೯ ರ ವರೆಗೆ ಆಳಿದ ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿ ಮತ್ತು ವಿಜಯನಗರದ ಅರಸರಲ್ಲಿ ಅತಿ ಪ್ರಮುಖನು. ತುಳುವ ರಾಜವಂಶದ ಮೂರನೆಯ ಅರಸ. ವಿಜಯನಗರ ಸಾಮ್ರಾಜ್ಯ ಈತನ ಆಳ್ವಿಕೆಯ ಕಾಲದಲ್ಲಿ ಉಚ್ಛ್ರಾಯಕ್ಕೇರಿತು.ಕನ್ನಡ ನಾಡಿನಲ್ಲಿ "ಮೂರುರಾಯರಗಂಡ", "ಕನ್ನಡರಾಜ್ಯ ರಮಾರಮಣ" ಎಂದೂ, ಆಂಧ್ರದಲ್ಲಿ "ಆಂಧ್ರಭೋಜ" ಎಂದೂ, ಸ್ವತಃ ಉತ್ತಮ ಬರಹಗಾರನಾಗಿದ್ದ ಕೃಷ್ಣದೇವರಾಯನು ಸಮಕಾಲೀನ ಕವಿಗಳಿಂದ "ಉರುಕಳ್ ವೈಭವ ನಿವಾಹ ನಿಧಾನ" ಎಂದೂ ಬಿರುದಾಂಕಿತನಾದ ಈತನ ಕಾಲದ ವೈಭವ ಇಂದೂ ಮನೆಮಾತಾಗಿದೆ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.